ಕಸಾಪ ಸದಸ್ಯತ್ವ ಅಭಿಮಾನದ ಸಂಕೇತ

ದಿ ಡೈಲಿ ನ್ಯೂಸ್ ಬೈಲಹೊಂಗಲ
ಸಮಸ್ತ ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆಯಾದ ಕನ್ನಡ ಸಾಹಿತ್ಯ ಪರಿಷತ್ತಿನ ಆಜೀವ ಸದಸ್ಯರಾಗುವುದು ಅಭಿಮಾನದ ಸಂಕೇತ ಎಂದು ಬೈಲಹೊಂಗಲ ಕ್ಷೇತ್ರ ಶಿಕ್ಷಣಾಧಿಕಾರಿ ಎ.ಎನ್.ಪ್ಯಾಟಿ ಹೇಳಿದರು. ಪಟ್ಟಣದ ಗಣಾಚಾರಿ ಕಾಲೇಜಿನಲ್ಲಿ ನಡೆದ ಪರಿಷತ್ತಿನ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.
ಕಸಾಪ ತಾಲೂಕಾ‘್ಯಕ್ಷ ಎನ್.ಆರ್.ಠಕ್ಕಾಯಿ ಮಾತನಾಡಿ, 1915ರಲ್ಲಿ ಸ್ಥಾಪನೆಯಾದ ಕಸಾಪಗೆ ಹೆಚ್ಚಿನ ಸಂಖ್ಯೆಯ ಸದಸ್ಯತ್ವ ಪಡೆಯುವುದರ ಮೂಲಕ ಕನ್ನಡದ ಸೇವೆಗೆ ಹೆಮ್ಮೆಯಿಂದ ಕೈ ಜೋಡಿಸುವಂತೆ ಮನವಿ ಮಾಡಿದರು. ಸದಸ್ಯರಾಗಬಯಸುವವರು ಆ‘ಾರ್ ಕಾರ್ಡ್, ಪೋಟೋ, ಮೊಬೈಲ್ ಸಂಖ್ಯೆ ಹಾಗೂ ಇನ್ನಿತರ ವಿವರಗಳೊಂದಿಗೆ ರೂ.400 ಶುಲ್ಕ ಪಾವತಿಸಿ ಆನ್ ಲೈನ್ ಕಸಾಪ ಆ್ಯಪ್ ಮೂಲಕ ಸದಸ್ಯತ್ವ ಪಡೆಯಬಹುದು. ಈಗಾಗಲೇ ಸದಸ್ಯರಿದ್ದವರು ರೂ.150 ಪಾವತಿಸಿ ಸ್ಮಾರ್ಟ್ ಕಾರ್ಡ ಪಡೆಯಬಹುದಾಗಿದೆ ಎಂದು ಮಾಹಿತಿ ನೀಡಿದರು.
ನೂತನ ಸದಸ್ಯತ್ವ ಪಡೆದವರಿಗೆ ಗುರುತಿನ ಚೀಟಿ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿಗಳಾದ ಬಿ.ಎನ್.ಕಸಾಳೆ, ಕಸಾಪ ಮಾರ್ಗದರ್ಶನ ಮಂಡಳಿ ಸದಸ್ಯರಾದ ಮೋಹನ ಬಸನಗೌಡ ಪಾಟೀಲ, ಬಿಇಒ ಹಾಗೂ ಬಿಆರ್‌ಸಿ ಕಚೇರಿ ಸಿಬ್ಬಂದಿ, ಶಿಕ್ಷಕರು ಉಪಸ್ಥಿತರಿದ್ದರು. ರಾಜು ಹಕ್ಕಿ ಸ್ವಾಗತಿಸಿದರು. ಎಸ್.ಎಸ್. ಚಳಕೊಪ್ಪ ವಂದಿಸಿದರು.

The Daily News Media

The Daily News Media