ಜಿಎಚ್ ನಾಯಕ್ ನಿ‘ನಕ್ಕೆ ಸಿಎಂ ಸಂತಾಪ

ದಿ ಡೈಲಿ ನ್ಯೂಸ್ ಬೆಂಗಳೂರು
ಕನ್ನಡದ ಖ್ಯಾತ ಲೇಖಕ ಹಾಗೂ ವಿಮರ್ಶಕ ಜಿಎಚ್ ನಾಯಕ್ ಅವರ ನಿ‘ನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಕನ್ನಡ ಸಾಹಿತ್ಯದ ವಿಮರ್ಶೆ, ವಿಶ್ಲೇಷಣೆ ಹಾಗೂ ಬರಹಲೋಕದ ಅಪರೂಪದ ವ್ಯಕ್ತಿ. ಪ್ರಗತಿಪರ ಚಿಂತಕರು, ಸೌಜನ್ಯಶೀಲ, ನಿಷ್ಠುರ ವಿಮರ್ಶಕ ನಾಯಕ್ ಅವರು ಪೂರ್ವಾಗ್ರಹವಿಲ್ಲದ ಅಪ್ಪಟ ಮಾನವೀಯ ಮನಸ್ಸುಳ್ಳವರಾಗಿದ್ದರು. ನಾಯಕ್ ಅವರು ಮೈಸೂರು ವಿವಿ ಕನ್ನಡ ಪ್ರಾ‘್ಯಾಪಕರಾಗಿ ಸಲ್ಲಿಸಿದ ಸೇವೆ ಅನನ್ಯ. ಹಂಪಿ ಹಾಗೂ ಮೈಸೂರು ವಿಶ್ವವಿದ್ಯಾಲಯದ ಕುವೆಂಪು ಕಾವ್ಯಾ‘್ಯಯನ ಪೀಠದ ಸಂದರ್ಶ ಪ್ರಾ‘್ಯಾಪಕರಾಗಿಯೂ ಅವರ ಸೇವೆ ಗಮನಾರ್ಹ. ಸಮಕಾಲೀನ, ಅನಿವಾರ್ಯ ನಿರಪೇಕ್ಷ ಸೇರಿದಂತೆ ಹಲವಾರು ವಿಮರ್ಶಾ ಕೃತಿಗಳು ಹಾಗೂ ಸಾಹಿತ್ಯ ಕೃತಿಗಳನ್ನು ಸಂಪಾದಿಸಿದ ಅವರು ಕರ್ನಾಟಕ ಸಾಹಿತ್ಯ ಅಕಾಡೆಮಿಯ ಅತ್ಯುತ್ತಮ ಸಾಹಿತ್ಯ ವಿಮರ್ಶೆ ಪ್ರಶಸ್ತಿಯನ್ನು ಒಳಗೊಂಡಂತೆ ಹಲವಾರು ಪ್ರಶಸ್ತಿಗಳಿಗೆ ‘ಾಜನರಾಗಿದ್ದರು. ಅವರ ನಿ‘ನದಿಂದ ಕನ್ನಡ ಸಾಹಿತ್ಯ ಲೋಕದ ಪ್ರಖರ ಚಿಂತರಕೊಬ್ಬರನ್ನು ಕಳೆದುಕೊಂಡಂತಾಗಿದೆ. ಅವರ ಆತ್ಮಕ್ಕೆ ಶಾಂತಿ ದೊರೆಯಲಿ. ಅವರ ಕುಟುಂಬ ಹಾಗೂ ಅಪಾರ ಅಭಿಮಾನಿಗಳಿಗೆ ಅಗಲಿಕೆಯ ದುಃಖವನ್ನು ‘ರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

The Daily News Media

The Daily News Media