ದಿ ಡೈಲಿ ನ್ಯೂಸ್ ವಿಜಯಪುರ
ಬೆಲೆಯೇರಿಕೆಯಿಂದ ಜನ ತತ್ತರಿಸಿದ್ದಾರೆ. ಇದರ ವಿರುದ್ಧ ‘ಯುವ ಆಕ್ರೋಶ’ ಹೆಸರಿನಲ್ಲಿ ಇದೇ ಏ.೯ ರಂದು ಬೃಹತ್ ಪ್ರತಿಭಟನಾ ರ್ಯಾಲಿ ನಡೆಸಲು ತೀರ್ಮಾನಿಸಲಾಗಿದೆ ಎಂದು ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಸಂಯುಕ್ತಾ ಪಾಟೀಲ ತಿಳಿಸಿದ್ದಾರೆ.
ವಿಜಯಪುರ ಡಿಸಿಸಿ ಕಾರ್ಯಾಲಯದಲ್ಲಿ ನಡೆದ ಕಾಂಗ್ರೆಸ್ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿ, ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿವೆ. ಬೆಲೆಯೇರಿಕೆ ನಿಯಂತ್ರಣವಾಗಬೇಕಿರುವ ನಿಟ್ಟಿನಲ್ಲಿ ಸರ್ಕಾರದ ಗಮನ ಸೆಳೆಯಲು ಹೋರಾಟ ಕೈಗೊಳ್ಳಲಾಗಿದೆ. ಶ್ರೀ ಸಿದ್ದೇಶ್ವರ ದೇಗುಲದಿಂದ ಆರಂಭವಾಗುವ ರ್ಯಾಲಿ ವಿವಿಧ ಪ್ರಮುಖ ಮಾರ್ಗಗಳಲ್ಲಿ ಸಂಚರಿಸಿ ಜಿಲ್ಲಾಧಿಕಾರಿಗಳ ಕಚೇರಿ ತಲುಪಲಿದೆ. ಕಾಂಗ್ರೆಸ್ ಕಾರ್ಯಕರ್ತರು ಈ ಹೋರಾಟವನ್ನು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದ್ದಾರೆ.
ಈ ವೇಳೆ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಮಹಮ್ಮದ ಹ್ಯಾರಿಸ್ ನಲಪಾಡ, ವಿನಯ ತಿಮ್ಮಾಪೂರ, ರಾಜ್ಯ ಯುವ ಕಾರ್ಯದರ್ಶಿ ಮೊಯಿನ್ ಶೇಖ ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್ಆರ್ ಆಲಗೂರ, ರಾಜ್ಯಯುವ ಕಾರ್ಯದರ್ಶಿಗಳಾದ ಮೊಯಿನ್ ಶೇಖ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಸಿದ್ದಪ್ಪ ಛಾಯಾಗೋಳ, ಜಿಲ್ಲಾ ಉಪಾಧ್ಯಕ್ಷ ಜೀವನ ಮ್ಯಾಗೇರಿ, ಹಾಗೂ ಜಿಲ್ಲೆಯ ಎಲ್ಲ ಮಾಜಿ ಸಚಿವರುಗಳು, ಹಾಲಿ ಶಾಸಕರು, ಮಾಜಿ ಶಾಸಕರು ಪಾಲ್ಗೊಂಡಿದ್ದರು