ಅದ್ಧೂರಿ ಸಿದ್ಧಲಿಂಗೇಶ್ವರ ರಥೋತ್ಸವ

ದಿ ಡೈಲಿ ನ್ಯುಸ್ ಕುಣಿಗಲ್
ಯಡಿಯೂರು ಸಿದ್ಧಲಿಂಗೇಶ್ವರಸ್ವಾಮಿ ಮಹಾರಥೋತ್ಸವವು ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ವೈಭವವಾಗಿ ನೆರವೇರಿತು.
ತಾಲೂಕಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಎಡೆಯೂರು ಸಿದ್ಧಲಿಂಗೇಶ್ವರ ಸ್ವಾಮಿಯ ಮಹಾರಥೋತ್ಸವವು ದೇಶ ವಿದೇಶಗಳಿಂದ ಬಂದಂತಹ ಲಕ್ಷಾಂತರ ಭಕ್ತಾದಿಗಳ ಸಮ್ಮುಖದಲ್ಲಿ ನಡೆಯಿತು.
ನೆರೆದಿದ್ದ ಭಕ್ತರು ಹೂವು ದವನ ಬಾಳೆಹಣ್ಣು ಅರ್ಪಿಸುವ ಮೂಲಕ ತಮ್ಮ ಹರಕೆ ಸಲ್ಲಿಸಿದರು. ಬಿಸಿಲಿನ ಜಳಕ್ಕೆ ಭಕ್ತರು ದಾರಿ ಉದ್ದಕ್ಕೂ ಕುಡಿವ ನೀರು, ಮಜ್ಜಿಗೆ, ಪಾನP, ಕೋಸಂಬರಿ ವಿತರಿಸಲಾಯಿತು.
ಸಿದ್ಧಗಂಗಾ ಮಠದ ಸಿದ್ಧಲಿಂಗ ಮಹಾಸ್ವಾಮಿ, ಬಾಳೆಹೊನ್ನೂರು ಶಾಖಾ ಮಠದ ರೇಣುಕಾ ಶಿವಾಚಾರ್ಯ ಸ್ವಾಮೀಜಿ, ಹಂಗರಹಳ್ಳಿ ವಿದ್ಯಾ ಚೌಡೇಶ್ವರಿ ಸಂಸ್ಥಾನಮಠದ ಬಾಲ ಮಂಜುನಾಥ ಸ್ವಾಮೀಜಿ, ಶಾಸಕ ರಂಗನಾಥ್, ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ್. ಉಪವಿಭಾಗಾಧಿಕಾರಿ ಅಜಯ್, ತಹಸೀಲ್ದಾರ್ ಮಹಾಬಲೇಶ್ವರ, ಸಿಇಒ ಜೋಸೆಫ್ ಮತ್ತಿತರರಿದ್ದರು.
ಡಿ.ವೈ.ಎಸ್.ಪಿ.ರಮೇಶ್, ವೃತ್ತ ನಿರೀಕ್ಷಕ ಗುರುಪ್ರಸಾದ್, ರಾಜು ಡಿ.ಎಲ್. ನೇತೃತ್ವದಲ್ಲಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಕೈಗೊಳ್ಳಲಾಗಿತ್ತು.

 

The Daily News Media

The Daily News Media