ಜೆಡಿಎಸ್‌ನತ್ತ ರಮೇಶ ಡಾಕುಳಗಿ

ದಿ ಡೈಲಿ ನ್ಯೂಸ್ ಬೀದರ್
ಹುಮನಾಬಾದ್ ತಾಲೂಕು ಪಂಚಾಯತಿ ಮಾಜಿ ಅಧ್ಯಕ್ಷ, ಕಾಂಗ್ರೆಸ್ ಮುಖಂಡ ರಮೇಶ ಡಾಕುಳಗಿ ಅವರು ಜೆಡಿಎಸ್ ಸೇರಿದ್ದಾರೆ. ಹುಮನಾಬಾದ್ ಶಾಸಕ ರಾಜಶೇಖರ ಪಾಟೀಲರ ಕಟ್ಟಾ ಬೆಂಬಲಿಗ ಎಂದೇ ಡಾಕುಳಗಿ ಗುರುತಿಸಿಕೊಂಡಿದ್ದರು.
ಔರಾದ್ ಮೀಸಲು ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಉದ್ದೇಶದಿಂದಲೇ ರಮೇಶ ಡಾಕುಳಗಿ ಕಾಂಗ್ರೆಸ್ ತೊರೆದು ಜೆಡಿಎಸ್ ಸೇರಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಜೆಡಿಎಸ್ ನಾಯಕತ್ವವು ಟಿಕೆಟ್ ಭರವಸೆ ನೀಡಿದೆ ಎಂದು ಹೇಳಲಾಗಿದೆ. ರಾಮನಗರದಲ್ಲಿ ನಡೆದ ಜನತಾ ಜಲಧಾರೆ ಕಾರ್ಯಕ್ರಮದಲ್ಲಿ ರಮೇಶ ಡಾಕುಳಗಿ ಜೆಡಿಎಸ್ ಸೇರಿದರು. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ, ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಮಾಜಿ ಸಚಿವ ಬಂಡೆಪ್ಪ ಖಾಶಂಪುರ, ಸಿಎಂ ಇಬ್ರಾಹಿಂ ಮತ್ತಿತರ ಮುಖಂಡರು ಉಪಸ್ಥಿತರಿದ್ದರು.

The Daily News Media

The Daily News Media