ದಿ ಡೈಲಿ ನ್ಯೂಸ್ ಮೈಸೂರು
ಗುತ್ತಿಗೆದಾರ ಸಂತೋ? ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಚಿವ ಈಶ್ವರಪ್ಪ ಅವರನ್ನು ಮಂತ್ರಿ ಹಾಗೂ ಶಾಸಕ ಸ್ಥಾನದಿಂದ ವಜಾಗೊಳಿಸಿ ಕೂಡಲೇ ಬಂಧಿಸುವಂತೆ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಆಗ್ರಹಿಸಿದೆ.
ನಗರದ ಉದಯಗಿರಿ ವೃತ್ತದಲ್ಲಿ ನಡೆದ ಪ್ರತಿಭಟನೆಯಲ್ಲಿ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಅಮ್ಜದ್ ಖಾನ್ ಮಾತನಾಡಿ, ಗುತ್ತಿಗೆದಾರ ಸಂತೋ? ಪಾಟೀಲ್ ಆತ್ಮಹತ್ಯೆಗೂ ಮುನ್ನ ಬರೆದಿರುವ ಡೆತ್ನೋಟ್ನಲ್ಲಿ ಈಶ್ವರಪ್ಪನವರೇ ನನ್ನ ಆತ್ಮಹತ್ಯೆಗೆ ಕಾರಣ ಎಂದು ಹೇಳಿದ್ದಾರೆ. ಅಲ್ಲದೇ ವಾಟ್ಸಾಪ್ ಮತ್ತು ವಿಡಿಯೋ ಮೂಲಕವೂ ಈಶ್ವರಪ್ಪ ಹೆಸರು ಪ್ರಸ್ತಾಪ ಮಾಡಿದ್ದಾರೆ. ಇದು ಆತಂಕಕಾರಿ ವಿ?ಯವಾಗಿರುವ ಕಾರಣ ಮುಖ್ಯಮಂತ್ರಿಗಳು ಕೂಡಲೇ ಈಶ್ವರಪ್ಪ ಅವರನ್ನು ಮಂತ್ರಿ ಮತ್ತು ಶಾಸಕ ಸ್ಥಾನದಿಂದ ವಜಾಗೊಳಿಸಿ ಬಂಧಸಿಬೇಕು ಎಂದರು.
ಜಿಲ್ಲಾಧ್ಯಕ್ಷ ರಫತ್ಖಾನ್ ಮಾತನಾಡಿದರು. ಪ್ರತಿಭಟನೆಯಲ್ಲಿ ಎಸ್ಡಿಪಿಐ ರಾಜ್ಯ ಸಮಿತಿ ಸದಸ್ಯ ಮೌಲಾನ ನೂರುದ್ದೀನ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಶಫಿಉಲ್ಲಾ, ಮುಖಂಡರಾದ ಫೈರೋಜ್, ಉಮರ್ ಶರೀಫ್, ವಕೀಲ ಇಬ್ರಾಹಿಂ ಪಠಾನ್, ಫರ್ದೀನ್, ಟ್ರೇಡ್ ಯೂನಿಯನ್ ರಾಜ್ಯ ಸಮಿತಿ ಸದಸ್ಯ ಕೌನೇನ್ ಮಿರ್ಝಾ, ಜಿಲ್ಲಾ ಅಧ್ಯಕ್ಷರಾದ ಅಲ್ತಾಫ್, ಉಪಾಧ್ಯಕ್ಷ ನಜ್ರುಲ್ಲಾ, ಕಾರ್ಯದರ್ಶಿ ನಜೀಬ್ ಖಾನ್, ಪಾಲಿಕೆ ಮಾಜಿ ಸದಸ್ಯ ಸ್ವಾಮಿ ಇದ್ದರು.