ದಿ ಡೈಲಿ ನ್ಯೂಸ್ ಮಂಡ್ಯ
ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಸರ್ಕಾರ ಕೊಲೆಗಡುಕ ಸರ್ಕಾರವಾಗಿದ್ದು, ಸರ್ಕಾರದ ಅನ್ಯಾಯ, ಅಕ್ರಮಗಳ ವಿರುದ್ಧ ರಾಜ್ಯದ ಜನರನ್ನು ಜಾಗೃತಿಗೊಳಿಸುವ ನಿಟ್ಟಿನಲ್ಲಿ ಈ ಸರ್ಕಾರದ ಇಂಚಿಂಚೂ ಅಕ್ರಮಗಳನ್ನು ಬಯಲು ಮಾಡುತ್ತೇವೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಸಿಲ್ವರ್ ಜ್ಯೂಬಿಲಿ ಪಾರ್ಕ್ನಲ್ಲಿ ಕಾಂಗ್ರೆಸ್ ಪಕ್ಷದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿ, ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ. ಮೈಷುಗರ್ ಕಾರ್ಖಾನೆ ಆರಂಭಿಸಿ ನಿಮ್ಮ ನಿರೀಕ್ಷೆ ನಿಜ ಮಾಡುತ್ತೇವೆ ಎಂದು ಭರವಸೆ ನೀಡಿದ್ದಾರೆ.
ರಸಗೊಬ್ಬರದ ಬೆಲೆಯನ್ನು ಅವೈಜ್ಞಾನಿಕವಾಗಿ ಏರಿಕೆ ಮಾಡುವ ಮೂಲಕ ಮೋದಿ ಸರ್ಕಾರ ೩೬೦೦ ಕೋಟಿ ರೂ. ರೈತರ ಕಿಸೆಯಿಂದ ಲೂಟಿ ಮಾಡುತ್ತಿದೆ. ಪೆಟ್ರೋಲ್ ಬೆಲೆ ೧೧೧ ರೂ., ಡಿಸೇಲ್ ಬೆಲೆ ೯೭ ರೂ.ಗೆ ಏರಿಸಿz ಇವರ ಸಾಧನೆ. ನಾನು ರಾಜ್ಯದ ಮುಖ್ಯಮಂತ್ರಿಯಾಗಿ ೨.೬೦ ಲಕ್ಷ ಕೃಷಿ ಹೊಂಡಗಳನ್ನು ತೋಡಿಸಿದ್ದೆ. ಯಡಿಯೂರಪ್ಪ ಮತ್ತು ಬೊಮ್ಮಾಯಿ ಸರ್ಕಾರದಲ್ಲಿ ಒಂದೇ ಒಂದು ತೋಡಿಸಿಲ್ಲ ಎಂದು ಮಾಹಿತಿ ನೀಡಿದ್ದಾರೆ. ಕೊಲೆಗಡುಕ ಸರ್ಕಾರ : ಈಶ್ವರಪ್ಪ ೪೦ ಪರ್ಸೆಂಟ್ ಕಮಿಷನ್ಗೆ ಒತ್ತಾಯಪಡಿಸಿ ಸಂತೋಷ್ ಪಾಟೀಲನ ಸಾವಿಗೆ ಕಾರಣವಾಗಿರುವುದು ಜಗಜ್ಜಾಹೀರಾಗಿದೆ. ಒಟ್ಟಿನಲ್ಲಿ ಇದು ಕೊಲೆಗಡುಕ ಸರ್ಕಾರ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈಶ್ವರಪ್ಪ ಅವರನ್ನು ವಹಿಸಿಕೊಂಡು ಎಚ್.ಡಿ.ಕುಮಾರಸ್ವಾಮಿ ಮಾತಾಡುವುದು ನೋಡಿದ್ರೆ ಒಬ್ಬ ಕಳ್ಳ ಮತ್ತೊಬ್ಬ ಕಳ್ಳನಿಗೆ ನೆರವಾದಂತಿದೆ ಎಂದು ಆರೋಪಿಸಿದ್ದಾರೆ. ಮಾಜಿ ಸಚಿವರಾದ ಎನ್.ಚಲುವರಾಯಸ್ವಾಮಿ, ಪಿ.ಎಂ.ನರೇಂದ್ರಸ್ವಾಮಿ, ಎಂ.ಎಸ್. ಆತ್ಮಾನಂದ, ಮಾಜಿ ಶಾಸಕರಾದ ಕೆ.ಬಿ.ಚಂದ್ರಶೇಖರ್, ರಮೇಶ್ ಬಂಡಿಸಿzಗೌಡ, ಬಿ.ಪ್ರಕಾಶ್, ಕಾಂಗ್ರೆಸ್ ರಾಜ್ಯ ಮಹಿಳಾಧ್ಯಕ್ಷೆ ಪುಷ್ಪ ಅಮರನಾಥ್, ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳೀಗೌಡ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಿ.ಡಿ.ಗಂಗಾಧರ್ ಇತರರಿದ್ದರು.