ದಿ ಡೈಲಿ ನ್ಯೂಸ್ ಮಂಡ್ಯ
ಜಿಲ್ಲಾದ್ಯಂತ ರೈತರು ತಮ್ಮ ಜಮೀನುಗಳನ್ನು ಅಳತೆ ಮಾಡಿ ಖಾತೆ ಮಾಡಿಕೊಡುವಂತೆ ಕಂದಾಯ ಸಚಿವ ಆರ್.ಅಶೋಕ್ ಅವರಿಗೆ ವಿ‘ನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಮನವಿಪತ್ರ ಸಲ್ಲಿಸಿದರು.
ಜಿಲ್ಲೆಯ ರೈತರು ತಮ್ಮ ಜಮೀನುಗಳನ್ನು ಅಳತೆ ಮಾಡಿ ಖಾತೆ ಮಾಡಿಕೊಡುವಂತೆ ಸಂಬಂಽಸಿದ ತಾಲೂಕು ಕಚೇರಿಗಳಲ್ಲಿ ಶುಲ್ಕಸಹಿತ ಅರ್ಜಿಗಳನ್ನು ಸಲ್ಲಿಸಿದ್ದಾರೆ ಎಂದರು.
ಮಂಡ್ಯ ಜಿಲ್ಲೆಯೊಂದರಲ್ಲೇ ೧೨ ಸಾವಿರ ಅರ್ಜಿಗಳು ಬಾಕಿ ಉಳಿದಿರುತ್ತವೆ, ಇದರಿಂದ ರೈತರು ಸರ್ಕಾರಕ್ಕೆ ನಿಗದಿತ ಶುಲ್ಕವನ್ನು ಪಾವತಿಸಿ ತಮ್ಮ ಜಮೀನುಗಳನ್ನು ಅಳತೆ ಮಾಡಿ ಅವರ ಜಮೀನುಗಳನ್ನು ಗುರುತು ಮಾಡಿಕೊಡುವಂತೆ ಅರ್ಜಿಗಳನ್ನು ಸಲ್ಲಿಸಿದ್ದರೂ ಸಹ ಹಲವು ತಿಂಗಳಿಂದ ಕೆಲಸವಾಗದೆ ಬಾಕಿ ಉಳಿದಿರುತ್ತವೆ. ಈ ಬಗ್ಗೆ ಜಿಲ್ಲಾಡಳಿತದಲ್ಲಿ ಈ ಬಗ್ಗೆ ಚರ್ಚಿಸಲಾಗಿ ಸಂಬಂಽಸಿದ ಸರ್ವೇಯರ್ಗಳ ಕೊರತೆ ಇರುವುದಾಗಿ ತಿಳಿಸಿರುತ್ತಾರೆ. ಮಂಡ್ಯ ಜಿಲ್ಲೆಗೆ ಅಗತ್ಯವಿರುವ ಸರ್ವೆಯರ್ಗಳನ್ನು ನಿಯುಕ್ತಿಗೊಳಿಸಿ ರೈತರು ತಮ್ಮ ಜಮೀನುಗಳನ್ನು ಅಳತೆ ಮಾಡಿ ಖಾತೆ ಮಾಡಿಕೊಡುವಂತೆ ಸಲ್ಲಿಸಿರುವ ಅರ್ಜಿಗಳನ್ನು ಕೂಡಲೇ ವಿಲೇವಾರಿ ಮಾಡಿ ರೈತರಿಗೆ ಅನುಕೂಲ ಮಾಡಿಕೊಡಬೇಕೆಂದು ಸಚಿವರಲ್ಲಿ ಮನವಿ ಮಾಡಿದರು.