ಕಾರ್ಯಕರ್ತರಿಗೆ ಕಿರುಕುಳ ಕೊಟ್ಟರೆ ಸಹಿಸಲ್ಲ

ದಿ ಡೈಲಿ ನ್ಯೂಸ್ ಬೆಂಗಳೂರು
ಜೆಡಿಎಸ್ ಕಾರ್ಯಕರ್ತರು, ಮುಖಂಡರು ಹಾಗೂ ನಮ್ಮ ಪಕ್ಷಕ್ಕೆ ಸೇರ್ಪಡೆ ಆಗುವವರ ವಿರುದ್ಧ ಪೊಲೀಸರ ದೌರ್ಜನ್ಯ ಮಿತಿಮೀರಿದೆ. ಇದಕ್ಕೆ ಕಡಿವಾಣ ಹಾಕಿಕೊಳ್ಳದಿದ್ದರೆ ಪಶ್ಚಾತ್ತಾಪ ಅನು‘ವಿಸಬೇಕಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ನೇರ ಎಚ್ಚರಿಕೆ ನೀಡಿದರು. ಯಲಹಂಕ ನ್ಯೂ ಟೌನ್ ಸೇರಿದಂತೆ ಕ್ಷೇತ್ರದ ಹಲವು ಕಡೆ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ ಸಂದ‘ರ್ದಲ್ಲಿ, ಪೊಲೀಸ್ ಇಲಾಖೆಯ ವಿರುದ್ಧ ತಮ್ಮ ಆಕ್ರೋಶ ಹೊರಹಾಕಿದರು. ಯಲಹಂಕದಲ್ಲಿ ನಮ್ಮ ಪಕ್ಷದ ಕಾರ್ಯಕರ್ತರಿಗೆ ಕಿರುಕುಳ ನೀಡುವ ಕೆಲಸ ಆಗುತ್ತಿದೆ. ಅನ್ಯಪಕ್ಷಗಳಿಂದ ನಮ್ಮ ಪಕ್ಷಕ್ಕೆ ಸೇರಲು ಬರುವ ಮುಖಂಡರು, ಕಾರ್ಯಕರ್ತರಿಗೆ ಬೆದರಿಕೆ ಹಾಕಲಾಗುತ್ತಿದೆ. ಇದನ್ನು ಸಹಿಸುವ ಪ್ರಶ್ನೆಯೇ ಇಲ್ಲ ಎಂದು ಕುಮಾರಸ್ವಾಮಿ ಅವರು ಹೇಳಿದರು. ಈ ಅಧಿಕಾರಿಗಳಿಗೆ ಹೇಳಲು ಬಯಸುತ್ತೇನೆ, ನೀವು ಪ್ರತಿ ತಿಂಗಳು ಸಂಬಳ ಪಡೆಯುವುದು ಜನರ ತೆರಿಗೆ ದುಡ್ಡಿನಿಂದ. ನೀವು ಅವರ ಸೇವೆ ಮಾಡಬೇಕೆ ವಿನಾ ಯಾರೋ ಶಾಸಕ ಹೇಳಿದಕ್ಕೆಲ್ಲ ತಲೆ ಆಡಿಸುವುದಲ್ಲ. ಇನ್ನೂ ಒಂದೇ ತಿಂಗಳು, ಆಗ ಈ ಸರಕಾರ ಇರಲ್ಲ. ಆಗ ನೀವು ಪ್ರಾಯಶ್ಚಿತ್ತ ಅನು‘ವಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಕಾರ್ಯಕರ್ತರು, ಮುಖಂಡರು ಹೆದರಬೇಕಿಲ್ಲ, ಯಾವುದೇ ಸಂದ‘ರ್ ಬಂದರೂ ನೇರವಾಗಿ ನನ್ನನ್ನು ಸಂಪರ್ಕ ಮಾಡಬಹುದು ಎಂದು ಕುಮಾರಸ್ವಾಮಿ ಅವರು ದೈರ್ಯ ತುಂಬಿದರು. ನನಗೆ ದ್ವೇಷದ ರಾಜಕಾರಣ ಮಾಡಿ ಗೊತ್ತಿಲ್ಲ. ಎಲ್ಲರೂ ಸುಖ ಶಾಂತಿಯಿಂದ ಇರಬೇಕು ಎಂದು ಬಯಸುವವನು. ಹೀಗಾಗಿ ಇಂಥ ಆಡಳಿತ ಬೇಕು ಎನ್ನುವುದನ್ನು ಜನರೇ ತೀರ್ಮಾನ ಮಾಡಿಕೊಳ್ಳಬೇಕು ಎಂದು ಅವರು ಹೇಳಿದರು. ಕ್ಷೇತ್ರದ ಅ‘್ಯರ್ಥಿ ಮುನೇಗೌಡ, ಮಾಜಿ ಶಾಸಕ ಇ ಕೃಷ್ಣಪ್ಪ, ಪಕ್ಷದ ಯಲಹಂಕ ಕ್ಷೇತ್ರದ ಅ‘್ಯಕ್ಷ ಕೃಷ್ಣಪ್ಪ, ಪಕ್ಷದ ಕಾನೂನು ಘಟಕದ ರಾಜ್ಯಾ‘್ಯಕ್ಷ ಎ.ಪಿ.ರಂಗನಾಥ್ ಮುಂತಾದವರು ಉಪಸ್ಥಿತರಿದ್ದರು.

The Daily News Media

The Daily News Media